ಹಾಸನ: ಕಾರು ಹಾಗೂ ಲಾರಿ ಭೀಕರ ಅಪಘಾತ ➤ ಪುತ್ತೂರಿನ ಯುವಕರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಜ. 14. ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ.


ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ ವಿಟ್ಲದ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Also Read  ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

error: Content is protected !!
Scroll to Top