ಸಿಎಂ ಮನೆ ಭದ್ರತಾ ಸಿಬ್ಬಂದಿಯಿಂದಲೇ ಡ್ರಗ್ ವ್ಯಾಪಾರ ➤ ಪೇದೆಗಳಿಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗಳಿಬ್ಬರು ಗಾಂಜಾ ವ್ಯಾಪಾರ ಮಾಡಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿ ಕಾನ್ಸ್‌ಟೇಬಲ್ ಗಳನ್ನು ಸಂತೋಷ್ ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಕೋರಮಂಗಳ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದು, ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದರು. ಇದಕ್ಕೂ ಮೊದಲು ಡ್ರಗ್ ಪೆಡ್ಲರ್ ಗಳ ಸಂಪರ್ಕ ಬೆಳೆಸಿ ಮಾರಾಟಕ್ಕೆ ಇಳಿದ ಇವರು ಸಿಸಿಬಿ ಕೈಗೂ ಸಿಕ್ಕಿಬಿದ್ದಿದ್ದರು. ಅಖಿಲ್ ರಾಜ್ ಹಾಗೂ ಅಮ್ಜದ್ ಎಂಬ ಪೆಡ್ಲರ್ ಗಳಿಂದ ಗಾಂಜಾ ಖರೀದಿಸಿದ್ದ ಇವರು ಹಣ ಕೊಟ್ಟಿರಲಿಲ್ಲ. ಕೇಳಿದರೆ ನಾವು ಪೊಲೀಸರು ಎಂದು ಹೇಳಿ ಹೆದರಿಸುತ್ತಿದ್ದರು. ಈ ವಿಚಾರವಾಗಿ ಪೆಡ್ಲರ್ ಗಳ ಜೊತೆ ವಾಗ್ವಾದಕ್ಕಿಳಿದು ಹಲ್ಲೆಗೆ ಮುಂದಾಗಿದ್ದು, ಇದನ್ನರಿತ ಆರ್.ಟಿ ನಗರ ಹೊಯ್ಸಳ ಸಿಬ್ಬಂದಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

Also Read  ಮಗನಿಂದ ತಂದೆಯ ಬರ್ಬರ ಕೊಲೆ ►ಅರ್ಧ ಗಂಟೆ ತಂದೆಯನ್ನು ಕೊಚ್ಚಿದ ಮಗ

 

 

error: Content is protected !!
Scroll to Top