ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ವೀಕೆಂಡ್ ಕರ್ಫ್ಯೂಗೆ ವ್ಯಕ್ತವಾಗಿರುವ ಜನಾಕ್ರೋಶ ಮತ್ತು ಅಪಸ್ವರದ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿದೆ.

 

 

ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ವೀಕೆಂಡ್ ಕರ್ಫ್ಯೂ ರದ್ದು ಮಾಡುವ ತೀರ್ಮಾನವನ್ನು ಕೈಗೊಕೊಳ್ಳಲಾಗಿದೆ. ಅಲ್ಲದೇ ಇದೇ ವೇಳೆ, ನೈಟ್ ಕರ್ಫ್ಯೂ ಅವಧಿಯನ್ನೂ ಕೂಡಾ ರಾತ್ರಿ 11ರಿಂದ ಬೆಳಗಿನ ಜಾವ ಐದಕ್ಕೆ ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಈಗಿರುವ 50-50 ನಿಯಮಗಳನ್ನು ಮಾತ್ರ ಮುಂದುವರೆಸುವ ಸಾಧ್ಯತೆ ಇದೆ.

Also Read  ಆಟವಾಡುತ್ತಿದ್ದ ವೇಳೆ‌ ಮೊಬೈಲ್ ಬ್ಯಾಟರಿ‌ ಸ್ಫೋಟ ➤ ಬಾಲಕ ಗಂಭೀರ

 

 

 

error: Content is protected !!
Scroll to Top