ಕಾರು- ಆಟೋ ರಿಕ್ಷಾ ನಡುವೆ ಅಪಘಾತ ➤ ಇಬ್ಬರು ಗಂಭೀರ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 26. ಕಾರು ಹಾಗೂ ಆಟೋರಿಕ್ಷಾ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚ್ ಬಳಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ.

ಗಾಯಗೊಂಡ ಆಟೋ ಚಾಲಕ ಶೇಖರ್ ಮಡಿವಾಳ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ - ಬರೋಬ್ಬರಿ ದಂಡ ವಿಧಿಸಿದ ಬೆಸ್ಕಾಂ

 

 

error: Content is protected !!
Scroll to Top