ಸಮಾಜ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಸುಳ್ಯದ ಬಶೀರ್ ಆರ್.ಬಿ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 29. ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಸಮಾಜ ಸೇವೆಯಲ್ಲಿ ಸಕ್ರಿಯರಾಗಿ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿರುವ ಬಶೀರ್ ಆರ್ ಬಿ ಪೈಚಾರ್ ಇವರು ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ.

ಬಶೀರ್ ಆರ್.ಬಿ ಪೈಚಾರು ಇವರು ಇಂದು (ಜ. 29) ಬೆಂಗಳೂರಿನ ಹೊಸೂರಿನಲ್ಲಿ ನಡೆಯಲಿರುವ ಏಷ್ಯಾ ವೇದಿಕ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯ ಕಾರ್ಯಕ್ರಮವೊಂದರಲ್ಲಿ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.

Scroll to Top