ಮಂಗಳೂರು: ಅನ್ಯಕೋಮಿನ ವಿದ್ಯಾರ್ಥಿಗಳಿಬ್ಬರು ಮಾತನಾಡುತ್ತಿದ್ದ ವೇಳೆ ತಂಡದಿಂದ ಹಲ್ಲೆ…! ➤ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಫೆ. 15. ಅನ್ಯ ಕೋಮಿನ ಸಹಪಾಠಿ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ ವಿದ್ಯಾರ್ಜನೆಗೈಯ್ಯುತ್ತಿರುವ ನೀಲೇಶ್ವರ ನಿವಾಸಿ ಅಶ್ವತಿ ತನ್ನ ಸಹಪಾಠಿಯಾಗಿದ್ದ ನಿಝಾರ್ ಜೊತೆ ರೈಲ್ವೇ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ತಂಡವೊಂದು ವಿದ್ಯಾರ್ಥಿಗಳಿಗೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Also Read  ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

error: Content is protected !!
Scroll to Top