ಆರೆಸ್ಸೆಸ್ ಕಾರ್ಯಕರ್ತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 15. ಆರ್ ಎಸ್ ಎಸ್ ಕಾರ್ಯಕರ್ತನೋರ್ವ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತ ಯುವಕನನ್ನು ಅಣಂಗೂರು ಜೆ. ಪಿ. ಕಾಲನಿ ನಿವಾಸಿ ಜ್ಯೋತಿಷ್ (35) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಫೆ. 15 ರ ಬುಧವಾರದಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ರಾತ್ರಿ ಮನೆಯಲ್ಲೇ ಮಲಗಿದ್ದ ಜ್ಯೋತಿಷ್ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಹುಡುಕಾಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಕುರಿತು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪತಿಗೆ ಡಿವೋರ್ಸ್ ಕೊಟ್ಟು ಇನ್ನೋರ್ವ ಯುವತಿ ಜೊತೆ ವಿವಾಹ ಮಾಡಿಕೊಂಡ ಎರಡು ಮಕ್ಕಳ ತಾಯಿ

error: Content is protected !!
Scroll to Top