ಮಲ್ಪೆ ದಕ್ಕೆಯ ನೀರಿಗೆ ಆಕಸ್ಮಿಕವಾಗಿ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 15. ಕಾರ್ಮಿಕನೋರ್ವ ಮಲ್ಪೆ ಬಂದರಿನ ದಕ್ಕೆಯ ನೀರಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.


ಮೃತ ಕಾರ್ಮಿಕನನ್ನು ಮಹಾರಾಷ್ಟ್ರ ರತ್ನಗಿರಿಯ ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಕಾರ್ಮಿಕರೊಂದಿಗೆ ಬಂದರಿನಲ್ಲಿ ನಾಗಾರ್ಜುನ ಕಂಪನಿಯ ಪೈಪ್ ಲೈನ್ ಕಾಮಗಾರಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಕಣ್ಮರೆಯಾಗಿದ್ದನು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ತುಂಬಾ ಸಮಯ ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಹಾಗಾಗಿ ಇಂದು ಕೂಡಾ ಕಾರ್ಯಾಚರಣೆ ನಡೆಸಿದಾಗ ವ್ಯಕ್ತಿ ಬಿದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

Also Read  ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

error: Content is protected !!
Scroll to Top