ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ..!! ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 04. ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕಾಣಿಯೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬಂಡಾಜೆ ನಿವಾಸಿ ಚಂದ್ರಶೇಖರ(57) ಎಂದು ಗುರುತಿಸಲಾಗಿದೆ. ಯುವತಿಯ ಸಹೋದರನು ತಂದೆ ತಾಯಿಯನ್ನು ಚಾರ್ವಾಕದಲ್ಲಿರುವ ಜಮೀನಿಗೆ ಬಿಟ್ಟು ಬರಲೆಂದು ಹೋದ ಸಂದರ್ಭ ಮನೆಯಲ್ಲಿ ಬುದ್ದಿಮಾಂದ್ಯ ಯುವತಿ ಒಬ್ಬಳೇ ಇದ್ದಳು. ಸಹೋದರ ವಾಪಾಸು ಮನೆಗೆ ಹಿಂತಿರುಗಿದಾಗ ಅಕ್ಕ ಕಾಣದೇ ಇದ್ದು, ಹುಡುಕಾಡಿದಾಗ ಮನೆಯ ಎದುರಿನ ಗುಡ್ಡದಿಂದ ಬರುತ್ತಿದ್ದಳು. ಆಕೆಯನ್ನು ವಿಚಾರಿಸಿದಾಗ ಚಂದ್ರಶೇಖರ ನನ್ನ ಜೊತೆ ನೀನು ಗುಡ್ಡಕ್ಕೆ ಬರಬೇಕು. ಇಲ್ಲದಿದ್ದರೆ ನಿನಗೆ ತೊಂದರೆ ನೀಡುತ್ತೇನೆ ಎಂದು ಬೆದರಿಸಿ ಕರೆದೊಯ್ದಿರುವುದಾಗಿ ಹೇಳಿದ್ದಾಳೆ. ಈ ಕುರಿತು ಪೊಲೀಸ್ ದೂರು ನೀಡಲಾಗಿದೆ.

Also Read  ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು

error: Content is protected !!
Scroll to Top