ಬೆಳ್ತಂಗಡಿ: ನೀರಲ್ಲಿ ಮುಳುಗಿ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 13. ವ್ಯಕ್ತಿಯೋರ್ವರು ಮೃತ್ಯುಂಜಯ ನದಿಗೆ ಸ್ನಾನಕ್ಕೆಂದು ಇಳಿದ ಸಂದರ್ಭ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್(35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group