Big Breaking News ➤ ಹಿಜಾಬ್ ನಿಷೇಧ ವಿರೋಧಿಸಿ ನಾಳೆ ಕರ್ನಾಟಕ ಬಂದ್…!!



(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 16. ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ಇದನ್ನು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.







ಮಾರ್ಚ್ 17 ಗುರುವಾರದಂದು ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧ ವ್ಯಕ್ತಪಡಿಸಬೇಕು. ನ್ಯಾಯಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು. ಬಲವಂತವಾಗಿ ಯಾರನ್ನೂ ಬಂದ್ ನಡೆಸಬಾರದು, ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.






error: Content is protected !!
Scroll to Top