ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜೊತೆಗಿದ್ದ ಅನ್ಯಧರ್ಮದ ವಿದ್ಯಾರ್ಥಿ- ವಿದ್ಯಾರ್ಥಿನಿಯರು..!! ➤ ಸಂಘಟನೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 16. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ವರದಿಯಾಗಿದೆ.

 

ಮಾ. 15ರಂದು ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಕೂಡಾ ಅನ್ಯಧರ್ಮದ ನಾಲ್ವರು ವಿದ್ಯಾರ್ಥಿಗಳು ಜೊತೆಯಾಗಿದ್ದುದನ್ನು ಗಮನಿಸಿದ ಕಾರ್ಯಕರ್ತರು ಅವರನ್ನು ವಿಚಾರಿಸಿ ಸಂಘಟನೆಯ ಕಚೇರಿಗೆ ಕರೆದೊಯ್ದು ಎಚ್ಚರಿಕೆ ನೀಡಿ ಬಳಿಕ ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ.

error: Content is protected !!

Join the Group

Join WhatsApp Group