ಮಾಣಿ: ಐರಾವತ ಬಸ್, ಲಾರಿ, ಕಾರು ಮಧ್ಯೆ ಸರಣಿ ಅಪಘಾತ ➤ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಾಣಿ, ಎ.19. ಐರಾವತ ಬಸ್, ಲಾರಿ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂರು ತಾಸಿಗೂ ಹೆಚ್ಚು ಕಾಲ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಯುಂಟಾದ ಘಟನೆ ಮಂಗಳವಾರದಂದು ಮಾಣಿ ಸಮೀಪ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿದ್ದ ಲಾರಿಗೆ ಢಿಕ್ಕಿ ಹೊಡೆದು ಬಳಿಕ ಕಾರಿಗೆ ಢಿಕ್ಕಿಯಾಗಿದೆ. ಇದರಿಂದಾಗಿ ಮೂರು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಯುಂಟಾಗಿದ್ದು, ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದವು. ವಿಟ್ಲ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Also Read  ಬಿಳಿನೆಲೆ: ಯುವಕ ಆತ್ಮಹತ್ಯೆ

 

 

error: Content is protected !!
Scroll to Top