ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದ ಕಾರ್ಮಿಕ ಗಂಭೀರ ➤ ರಸ್ತೆಯಲ್ಲಿ ಚೆಲ್ಲಾಡಿದ ರಕ್ತಸಿಕ್ತ ಮಾಂಸ

(ನ್ಯೂಸ್ ಕಡಬ) newskadaba.com ಸುಳ್ಯ, ಎ.20. ಲಾರಿಯಡಿಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉತ್ತರ ಕರ್ನಾಟಕ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಮಂಜುನಾಥ್ ಸುಳ್ಯದ ಗಾಂಧಿನಗರದಲ್ಲಿ ವಾಸವಾಗಿದ್ದು, ಬುಧವಾರದಂದು ಸುಳ್ಯ ಪೇಟೆಯಲ್ಲಿ ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದಿದ್ದು, ಲಾರಿ ಹರಿದ ಪರಿಣಾಮ ದೇಹದ ಭಾಗ ಚೆಲ್ಲಾಡಿದಂತಾಗಿದೆ. ತಕ್ಷಣವೇ ಸ್ಥಳೀಯರು ಮಂಜುನಾಥ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Also Read  ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು

 

 

error: Content is protected !!
Scroll to Top