ಚರಣ್ ರಾಜ್ ಕೊಲೆ ಪ್ರಕರಣ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 06. ಪೆರ್ಲಂಪಾಡಿ ಎಂಬಲ್ಲಿ ನಡೆದ ಚರಣ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನರ್ಮೇಶ್ ರೈ, ನಿತಿಲ್ ಶೆಟ್ಟಿ ಹಾಗೂ ವಿಜೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಪುತ್ತೂರಿನ ಕೆಯ್ತೂರು ಪಲ್ಲತ್ತಡ್ಕದಿಂದ ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ. ಕಿಶೋರ್ ಪೂಜಾರಿ ತಂಡ ತಲವಾರಿನಿಮದ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೊಂದು ಪೂರ್ವ ದ್ವೇಷದ ಕಾರಣದಿಂದ ಕೊಲೆ ಮಾಡಲಾಗಿದೆ ಎಂಬ ಮಾಹಿತಿಯಿದ್ದು, ಅಲ್ಲದೇ ಈ ಹಿಂದೆ ನಡೆದ ಕಾರ್ತಿಕ್ ಮೇರ್ಲ ಅವರ ಕೊಲೆಗೆ ಪ್ರತೀಕಾರವಾಗಿ ನಡೆದಿರುವ ಕೊಲೆ ಎಂಬ ಶಂಕೆಯಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ ಹಾಗೂ ಬೆಳ್ಳಾರೆ ಠಾಣಾ ಪಿಎಸ್ಐ ರುಕ್ಮ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

Also Read  ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಮೆಚ್ಚುಗೆಗೆ ಪಾತ್ರನಾದ ಎಂಡೋ ಸಂತ್ರಸ್ಥ

 

error: Content is protected !!
Scroll to Top