ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ ➤ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 10. ಅಂಗಡಿ ಮಾಲಕರೋರ್ವರು ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ತಾಲೂಕಿನ ಕುರಿಯದಲ್ಲಿ ನಡೆದಿದೆ.


ಮೃತರನ್ನು ಕುರಿಯ ಹೊಸಮಾರು ನಿವಾಸಿ ರಮೇಶ್ ರೈ ಎಂದು ಗುರುತಿಸಲಾಗಿದೆ. ಮನೆಯ ಪಕ್ಕದಲ್ಲೇ ಅಂಗಡಿ ಹೊಂದಿದ್ದ ಇವರು, ಗುರುವಾರದಂದು ಮಧ್ಯಾಹ್ನದ ವೇಳೆಗೆ ವಿಷ ಸೇವಿಸು ಬಳಿಕ ಮನೆ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇಹದ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Also Read  ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

error: Content is protected !!
Scroll to Top