ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ ➤‌ ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರೀತ ಮಳೆ ಸುರಿಯುತ್ತಿದ್ದು, ಈ ಮಳೆಗೆ ಅಪಾಯಕಾರಿಯಾಗಿರುವ ಮರ ಉರುಳಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ಕುಂಟು ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ. ಇನ್ನಾದರೂ ರಸ್ತೆ ಬದಿಯ ಮರ ತೆರವುಗೊಳಿಸುವಲ್ಲಿ ಅರಣ್ಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Also Read  ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಕರೆ ➤ ಆರೋಪಿ ಬಾಯ್ಬಿಟ್ಟ ಸತ್ಯ ಕೇಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ

 

 

error: Content is protected !!
Scroll to Top