ಕೊಕ್ಕಡ: ಕಾರಿನಲ್ಲಿ ಕರೆದುಕೊಂಡು ಹೋಗಿ ತಂಡದಿಂದ ವ್ಯಕ್ತಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 18. ವ್ಯಕ್ತಿಯೋರ್ವನನ್ನು ತಂಡವೊಂದು ಕಾರಿನಲ್ಲಿ ಕರೆದೊಯ್ದು ತೀವ್ರ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಕೊಕ್ಕಡ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೂ.17 ಶುಕ್ರವಾರದಂದು ಸಂಜೆ ಬೋಳ ಪರಿಸರದ ಮೂರು ಮಂದಿ ತನ್ನನ್ನು ಕಾರಿನಲ್ಲಿ ಬರುವಂತೆ ಒತ್ತಾಯಿಸಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಮೊಬೈಲ್‌ ಫೋನ್ ಒಡೆದು ಹಾಕಿರುವುದಾಗಿ ಹಲ್ಲೆಗೊಳಗಾದ ಸಮೀರ್ ಆರೋಪಿಸಿದ್ದಾರೆ.

error: Content is protected !!
Scroll to Top