ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ➤ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 24. ಕೆಎಸ್ಸಾರ್ಟಿಸಿ ಬಸ್, ಮಿನಿ ಟ್ಯಾಂಕರ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಒಂದು ಗಂಟೆಗೂ ಅಧಿಕ ಕಾಲ ಸಂಚಾರ ಬಂದ್ ಆದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.


ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಬೆದ್ರೋಡಿ ತಿರುವಿನಲ್ಲಿ ಡಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಗೂ ಢಿಕ್ಕಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರೊರ್ವರ ಕೈಗೆ ಗಾಜಿನ ಚೂರು ತಾಗಿ ಸಣ್ಣ ಪುಟ್ಟ ಗಾಯವಾದರೆ, ಉಳಿದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಚಿನ್ನ ಪ್ರಿಯರಿಗೆ ಮತ್ತೆ ಶಾಕ್

error: Content is protected !!
Scroll to Top