ಕಡಬ: ಬಿಜೆಪಿ ಸರಕಾರ 8 ವರ್ಷ ಪೂರೈಸಿದ ಹಿನ್ನೆಲೆ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳ ಹೋರಾಟಗಾರರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕೇಂದ್ರದ ಮೋದಿ ನೇತೃತ್ವದ ಸರಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಸೇವೆ, ಸುಶಾಸನ, ಬಡವರ ಕಲ್ಯಾಣ ಯೋಜನೆಯಡಿ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳ ಹೋರಾಟಗಾರರಿಗೆ ಗೌರವಾರ್ಪಣೆ ಕಾರ್ಯಕ್ರಮವು ನೂಜಿಬಾಳ್ತಿಲ ಕಲ್ಲುಗುಡ್ಡೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಮಳೇಲ ಶೇಖರ ಗೌಡ ಮತ್ತು ಜಯವರ್ಮ ಜೈನ್, ಸುಜೇತ ಜೈನ್ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಕೃಷ್ಣ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ ಸದಸ್ಯರಾದ ಇಮ್ಯಾನುವೆಲ್, ವಿನಯ ಮೊದಲಾದವರು ಉಪಸ್ಥಿತರಿದ್ದರು.

Also Read  ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ 

error: Content is protected !!
Scroll to Top