ಮಗನಿಂದಲೇ ತಂದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ತುಮಕೂರು, ಜೂ. 28. ಕ್ಷುಲ್ಲಕ ಕಾರಣಕ್ಕೆ ಮಗನೋರ್ವ ತಂದೆಯನ್ನೆ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ.

ಹತ್ಯೆಗೊಳಗಾದವರನ್ನು ಆಸಿಫ್ (56) ಎಂದು ಗುರುತಿಸಲಾಗಿದೆ. ಮಗ ಇಮ್ರಾನ್ ಬಂಧಿತ ಆರೋಪಿಯಾಗಿದ್ದಾನೆ. ತಂದೆ- ಮಗನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಘಟನೆಯ ಕುರಿತು ಜಯನಗರ ಪೊಲೀಸ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!

Join the Group

Join WhatsApp Group