ಮಂಗಳೂರು: ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ ನೀಡಿ..! ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ದ.ಕ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಈಗಾಗಲೇ ಶಾಲೆಗೆ ಬಂದಿರುವ ಮಕ್ಕಳಿಗೆ ಮುಂಜಾಗ್ರತೆ ವಹಿಸಿ ತರಗತಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಮಳೆಯ ಪ್ರಮಾಣ ನೋಡಿಕೊಂಡು ಪರಿಸ್ಥಿತಿ ನಿಭಾಯಿಸಲು ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Also Read  ಅ.2: ಅಂಗನವಾಡಿ ಕೇಂದ್ರಗಳಲ್ಲಿ 'ಮಾತೃಪೂರ್ಣ ಯೋಜನೆ' ಜಾರಿ

error: Content is protected !!
Scroll to Top