ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಧರೆ ಕುಸಿತ ➤ ಸುಳ್ಯ- ಪಾಣತ್ತೂರು ಅಂತರಾಜ್ಯ ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಭಾರೀ ಮಳೆಗೆ ಧರೆ ಕುಸಿದ ಪರಿಣಾಮ ಸುಳ್ಯ-ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ.


ಗಡಿ ಪ್ರದೇಶವಾದ ಬಾಟೋಳಿಯಲ್ಲಿ ಕೇರಳ ಭಾಗದ ರಸ್ತೆ ಬದಿಯಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ರಸ್ತೆ ಮುಚ್ಚಿಹೋಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಅರ್ಧದಲ್ಲಿದೆ. ರಸ್ತೆ ಮೇಲೆ ಮಣ್ಣು ಕುಸಿದ ಕಾರಣ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Also Read  ವಿಶ್ವ ಜಲ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ

error: Content is protected !!
Scroll to Top