ಶಿರಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 01. ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ 75ರ ಶಿರಾಡಿಯ ಬರ್ಚನಹಳ್ಳಿ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವಾಹನಗಳೆರಡೂ ಜಖಂಗೊಂಡಿದ್ದು, ಶ್ರೀಕಾಂತ್ ಎಂಬವರ ಕಣ್ಣು ಮತ್ತು ಕಾಲಿಗೆ ಗಾಯವಾಗಿದೆ. ಲಾರಿ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಬಸ್ ಚಾಲಕ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ - ಓರ್ವನ ಬಂಧನ, ಮತ್ತೋರ್ವ ಪರಾರಿ

error: Content is protected !!
Scroll to Top