ಮುಂದುವರಿದ ವರುಣನ ಆರ್ಭಟ ➤ ಹಳ್ಳದಲ್ಲಿ ಕೊಚ್ಚಿಹೋಗಿ ಏಳು ವರ್ಷದ ಬಾಲಕಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು. 05. ಶಾಲಾ ವಿದ್ಯಾರ್ಥಿನಿಯೋರ್ವಳು ಕಿರು ಸೇತುವೆ ದಾಟುತ್ತಿದ್ದ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.


ವಿದ್ಯಾರ್ಥಿನಿಯನ್ನು ಸುಪ್ರೀತ ಎಂದು ಗುರುತಿಸಲಾಗಿದೆ. ಈಕೆ ಶಾಲೆ ಬಿಟ್ಟು ಸಂಜೆ ಮನೆಗೆ ತೆರಳುತ್ತಿದ್ದು, ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿರುವ ಹಳ್ಳವನ್ನು ದಾಟುವ ವೇಳೆ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮಗುವಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Also Read  ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು

error: Content is protected !!
Scroll to Top