ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದುಗಲಡ್ಕದಿಂದ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ದುಗಲಡ್ಕ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ. ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು, ನಿನ್ನೆ ವಿಷ ಸೇವಿಸಿದ್ದು, ಕೂಡಲೇ ವಿಷಯ ತಿಳಿದ ಸ್ನೇಹಿತರು ಸುಳ್ಯದ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

error: Content is protected !!

Join the Group

Join WhatsApp Group