ಪುತ್ತೂರು: ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 06. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಇಂಜಿನ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಮುಖ್ಯರಸ್ತೆಯ ಮಯೂರ ಚಿತ್ರಮಂದಿರದ ಬಳಿ ನಡೆದಿದೆ.

 

ತಕ್ಷಣವೇ ಸಮೀಪದ ಟಾಟಾ ಸಂಸ್ಥೆಯ ಸಹಾಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಇಂಜಿನ್ ನಲ್ಲಿನ ಬ್ಯಾಟರಿ ಸಮಸ್ಯೆಯಿಂದಾಗಿ ಈ ಘಟನೆ ಸಂಭವಿಸಿದೆನ್ನಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Also Read  ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ - ಅರ್ಜಿ ಆಹ್ವಾನ

error: Content is protected !!
Scroll to Top