ಅರಂತೋಡು: ಗುಡ್ಡ ಕುಸಿತ ➤ ರಸ್ತೆ ಸಂಚಾರ ಬಂದ್…!

(ನ್ಯೂಸ್ ಕಡಬ) newskadaba.com ಅರಂತೋಡು, ಜು. 06. ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತೊಡಿಕಾನ ಮಾವಿನಕಟ್ಟೆ ಮುತ್ತುಕೋಡಿ ಬಾಳೆಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ.

ರಸ್ತೆ ಬಂದ್ ನಿಂದಾಗಿ ತೊಡಿಕಾನ ಗ್ರಾಮದೊಂದಿಗೆ ಸಂಪರ್ಕ ಕಳೆದುಕೊಂಡ ಸ್ಥಳೀಯ ನಿವಾಸಿಗಳು ತೊಂದರೆಗೊಳಗಾಗಿದ್ದು, ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ಗಮನಹರಿಸಿ ರಸ್ತೆಗೆ ಬಿದ್ದ ಗುಡ್ಡವನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಕುರಿತು ಸ್ಥಳೀಯರು ಗ್ರಾಮ ಪಂಚಾಯತ್ ನ ಗಮನಕ್ಕೆ ತಂದಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೂಕ್ತ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ

error: Content is protected !!
Scroll to Top