ಕಡಬ: ಸರಸ್ವತೀ ವಿದ್ಯಾಲಯದ ಶಿಶುಮಂದಿರದ ತಡೆಗೋಡೆ ಕುಸಿತ..!!

(ನ್ಯೂಸ್ ಕಡಬ) newskadaba.com ಕಡಬ, ಜು. 08. ನಿರಂತರ ಸುರಿದ ಮಳೆಗೆ ಕಡಬ-ಪಂಜ ರಸ್ತೆಯ ವಿದ್ಯಾನಗರದಲ್ಲಿನ ಶಾಲೆಯೊಂದರ ತಡೆಗೋಡೆ ಕುಸಿದು ಬಿದ್ದ ಘಟನೆ ವರದಿಯಾಗಿದೆ.

ಇಲ್ಲಿನ ಸರಸ್ವತೀ ವಿದ್ಯಾಲಯವು ತಮ್ಮ ಶಾಲಾ ವಠಾರದಲ್ಲಿದ್ದ ಶಿಶು ಮಂದಿರದ ಬಳಿ ತಡೆಗೋಡೆ ನಿರ್ಮಿಸಿತ್ತು. ಇದೀಗ ನಿರಂತರ ಸುರಿಯುತ್ತಿರುವ ವಿಪರೀತ ಮಳೆಗೆ ರಸ್ತೆ ಸಮೀಪದ ತಡೆಗೋಡೆಯ ಮಣ್ಣು ಸಡಿಲಗೊಂಡು ಪೂರ್ತಿಯಾಗಿ ವಾಲಿಕೊಂಡಿದೆ. ಪಿಲ್ಲರ್ ಅಳವಡಿಸದೇ ತಡೆಗೋಡೆ ನಿರ್ಮಿಸಿರುವುದೇ ಈ ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Also Read  ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ - ಓರ್ವನ ಬಂಧನ

error: Content is protected !!
Scroll to Top