ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ನಿಂತಿಕಲ್ಲು ಕೆ.ಎಸ್.ಗೌಡ ಶಾಲೆಯ ಕುಶ್ಮಿತಾ ಶಿರಾಜೆ ತೃತೀಯ

(ನ್ಯೂಸ್ ಕಡಬ) newskadaba.com ಕಡಬ, ಜು. 08. ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಸ್ತುತಪಡಿಸಿದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಿಂತಿಕಲ್ಲು ಕೆಎಸ್.ಗೌಡ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಶ್ಮಿತಾ ಶಿರಾಜೆ ಅವರು ತೃತೀಯ ಸ್ಥಾನ ಹಾಗೂ ವಿಜಯವಾಣಿ ಕನ್ನಡ ದಿನಪತ್ರಿಕೆ ಇವರು ಪ್ರಸ್ತುತಪಡಿಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತಾಳೆ. ಇವರು ಶ್ರೀ ನಾರಾಯಣ ಶಿರಾಜೆ ಮತ್ತು ಶ್ರೀಮತಿ ಚಂದ್ರಕಲಾ ಶಿರಾಜೆ ದಂಪತಿಗಳ ಪುತ್ರಿ. ಇವರಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಇವರು ಚಿತ್ರಕಲಾ ತರಬೇತಿಯನ್ನು ನೀಡಿರುತ್ತಾರೆ.

error: Content is protected !!
Scroll to Top