ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 12. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು ನಡೆದಿದೆ.

 


ಮೃತರನ್ನು ಮೆಸ್ಕಾಂ ಕುಂಬ್ರ ಶಾಖೆಯ ಪವರ್ ಮ್ಯಾನ್ ಬಸವರಾಜ್ (26) ಎಂದು ಗುರುತಿಸಲಾಗಿದೆ. ಬಸವರಾಜ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಕೆಲವು ಸಮಯಗಳಿಂದ ಕುಂಬ್ರ ಮೆಸ್ಕಾಂನಲ್ಲಿ ನಿರ್ವಹಿಸುತ್ತಿದ್ದರೆನ್ನಲಾಗಿದೆ.

error: Content is protected !!

Join the Group

Join WhatsApp Group