ಸುಳ್ಯ: ಕಾಡಾನೆ ಹಿಂಡು ದಾಳಿ ➤ ಅಪಾರ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಸೋಮವಾರ ಬೆಳಿಗ್ಗೆ ಮಾವಂಜಿ ಭಾಗದಲ್ಲಿ ಪ್ರತ್ಯಕ್ಷಗೊಂಡ ಕಾಡಾನೆಗಳ ಹಿಂಡು ಕೃಷಿ ಹಾನಿ ಮಾಡಿ ಅಪಾರ ನಷ್ಟವುಂಟಾದ ಘಟನೆ ವರದಿಯಾಗಿದೆ.

ಒಂದು ಮರಿ ಹಾಗು ಮೂರು ದೊಡ್ಡ ಆನೆಗಳ ಹಿಂಡು ಸೀತಾರಾಮ ಮಣಿಯಾಣಿ ಎಂಬವರ ತೋಟಕ್ಕೆ ನುಗ್ಗಿ ಬಾಳೆ, ತೆಂಗು ಸೇರಿ ಅಪಾರ ಕೃಷಿ ಹಾನಿಗೊಳಿಸಿದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾಳಿ ನಿರಂತರವಾಗಿ ಮುಂದುವರಿದಿದ್ದು ಮಳೆಗಾಲ ಆರಂಭವಾದ ಬಳಿಕ ಆನೆ ಹಾವಳಿ ಇನ್ನಷ್ಟು ತೀವ್ರಗೊಂಡಿದೆ.

Also Read  ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ - 11 ಸ್ಟಾಲ್ ಗಳ ಹರಾಜು

error: Content is protected !!
Scroll to Top