ಪ್ರವೀಣ್ ಹತ್ಯೆ ಆರೋಪಿಗಳ ಬಂಧನದ ಬೆನ್ನಲ್ಲೇ ಗುತ್ತಿಗಾರಿನಲ್ಲಿ ಅಂಗಡಿಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 28. ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬಂಧಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ ಗುತ್ತಿಗಾರು ಪೇಟೆಯಲ್ಲಿ ಸುಮಾರು 50ಕ್ಕೂ ಅಧಿಕ ಹಿಂದೂ ಸಂಘಟನಾ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ 4-5 ಅಂಗಡಿಗಳಿಗೆ ನುಗ್ಗಿ ವಸ್ತುಗಳನ್ನು ಎಸೆದು ಹಾನಿಗೊಳಿಸಿರುವುದಾಗಿ ತಿಳಿದುಬಂದಿದೆ.


ಬಂಧಿತ ಆರೋಪಿಗಳ ಪೈಕಿ ಶಫೀಕ್ ಎಂಬಾತ ಗುತ್ತಿಗಾರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೊಲೆ ಆರೋಪದಲ್ಲಿ ಬಂಧಿತನಾಗಿರುವುದನ್ನು ತಿಳಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

error: Content is protected !!

Join the Group

Join WhatsApp Group