ಫಾಝಿಲ್ ಕೊಲೆ ಪ್ರಕರಣ ➤ ನಾಲ್ವರು ಭಜರಂಗದಳ ಕಾರ್ಯಕರ್ತರು ವಶಕ್ಕೆ…??

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 4 ಮಂದಿ ಭಜರಂಗದಳ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

 

ವಿಚಾರಣೆ ಹಿನ್ನಲೆ ನಾಲ್ವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದ್ದು, ಈ ಕುರಿತು ಮನೆಯವರು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಈ ಹತ್ಯೆಯ ಹಿಂದೆ ಭಜರಂಗದಳದ ನೇರ ಕೈವಾಡ ಶಂಕೆ..!? ವ್ಯಕ್ತವಾಗುತ್ತಿದ್ದು, ತನಿಖೆಯಿಂದ ನಿಜಾಂಶ ತಿಳಿದು ಬರಬೇಕಿದೆ.

error: Content is protected !!
Scroll to Top