ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಪ್ರಕರಣ ➤ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಕಳೆದ ರಾತ್ರಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿದರು.


ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಪಿಡಿಒ ಶೇಖರ್ ಯು.ಡಿ ಸೇರಿದಂತೆ ಅಧಿಕಾರಿಗಳು ಜೊತೆಗಿದ್ದರು.

Also Read  ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

error: Content is protected !!
Scroll to Top