ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ➤ ಪರಿಹಾರ, ರಕ್ಷಣಾ ಕಾರ್ಯಗಳಿಗೆ ಕ್ರಮ- ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 02. ರಾಜ್ಯದ ಹಲವಾರು ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.


ಈ ಕುರಿತು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಹಾಗೂ ಕರಾವಳಿಯಲ್ಲಿ ಪುನಃ ಮಳೆಯಾಗುತ್ತಿದ್ದು, ಇದರಿಂದ ಹಲವಾರು ಸಾವು ನೋವುಗಳಾಗಿವೆ. ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೇ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಫಾಕ್ಸ್ ನಿಯಂತ್ರಿಸುವ ಬಗ್ಗೆಯೂ ಸಭೆ ನಡೆಸಲಾಗುವುದು ಎಂದರು.

Also Read  ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು

error: Content is protected !!
Scroll to Top