ಪುತ್ತೂರು: ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ ➤‌ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 10. ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೋರ್ವರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

 

ಬಿಳಿ ಪಂಚೆ ಧರಿಸಿದ್ದ ವ್ಯಕ್ತಿಯೊಬ್ಬರು ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

Also Read  ಪಿಕ್‌ನಿಕ್‌ಗೆ ಹೊರಟಿದ್ದ ವಿದ್ಯಾರ್ಥಿನಿಯರ ಟ್ರಾಕ್ಟರ್ ಪಲ್ಟಿ ➤ ಓರ್ವ ವಿದ್ಯಾರ್ಥಿನಿ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ

error: Content is protected !!
Scroll to Top