ಕಾಡಾನೆ ದಾಳಿ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಆ. 10. ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚೆಟ್ಟಳ್ಳಿ ಸಮೀಪದ ಕುಡ್ಲೂರು ಚೆಟ್ಟಳ್ಳಿಯ ಮಲಕೋಡುವಿನಲ್ಲಿ ನಡೆದಿದೆ.


ಮೃತಪಟ್ಟವರನ್ನು ಮಲಕೋಡ್ ನಿವಾಸ್ ಮುಹಮ್ಮದ್ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಠಾತ್ತನೆ ಪ್ರತ್ಯಕ್ಷವಾದ ಕಾಡಾನೆ ಇವರ ಮೇಲೆ ದಾಳಿ ಮಾಡಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುತ್ತಿರುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದೆನ್ನಲಾಗಿದೆ.

Also Read  ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ - ಆರೋಪಿ ಅರೆಸ್ಟ್…!

error: Content is protected !!
Scroll to Top