ಸುಬ್ರಹ್ಮಣ್ಯ: ಈಜಲೆಂದು ತೆರಳಿದ ಯುವಕ ನೀರಿನಲ್ಲಿ ಕಣ್ಮರೆ ➤‌ ಮುಂದುವರಿದ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಕುಕ್ಕೇಶ್ರೀ ದೇವಳಕ್ಕೆ ದರ್ಶನಕ್ಕೆಂದು ಬಂದಿದ್ದ ಯುವಕರ ತಂಡದಲ್ಲಿದ್ದ ಯುವಕನೋರ್ವ ಭಾನುವಾರ ಸಂಜೆ ಕುಮಾರಧಾರಾ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದು, ಇದೀಗ ಶೋಧ ಕಾರ್ಯ ಆರಂಭವಾಗಿದೆ.

ನಾಪತ್ತೆಯಾದ ಯುವಕನನ್ನು ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ಶಿವು(25) ಎಂದು ಗುರುತಿಸಲಾಗಿದೆ. ಈತ ಭಾನುವಾರದಂದು ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುವ ಸಂದರ್ಭ ಕುಮಾರಧಾರಾ ನದಿಗೆ ತೆರಳಿದ್ದು, ಈ ಸಂದರ್ಭ ಶಿವು ಅವರು ಸ್ನಾನ ಮಾಡಲೆಂದು ನದಿಗೆ ಹಾರಿದ್ದರು. ಈಜು ಬರುತ್ತಿದ್ದರೂ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಹೀಗಾಗಿ ಕುಮಾರಧಾರಾ ನದಿಯಲ್ಲಿ ಮುಳುಗು ತಜ್ಞರು ಹಾಗೂ ಅಗ್ನಿಶಾಮಕದ ದಳದ ಸಿಬಂದಿಗಳು, ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Also Read  ಕೊರೋನಾ ವರದಿ ನೆಗೆಟಿವ್ ಬಂದರೂ ಕ್ವಾರಂಟೈನ್ ಕಡ್ಡಾಯ..! ➤ ಸಚಿವ ಸುಧಾಕರ್ ಸ್ಪಷ್ಟನೆ

error: Content is protected !!
Scroll to Top