ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ➤‌ ಯುವಕನಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 23. ವಿದ್ಯಾರ್ಥಿನಿಗೆ ಇನ್ ಸ್ಟಾಗ್ರಾಂ ನಲ್ಲಿ ಮೆಸೇಜ್ ಮಾಡಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಲ್ಲಿನ ಕರ್ವೇಲು ನಿವಾಸಿ ಸಮೀರ್ ಎಂಬಾತ ಖಾಸಗಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಇನ್ ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದು, ಇದನ್ನು ಆಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿದ ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

Also Read  ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ - ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

error: Content is protected !!
Scroll to Top