ಬಂಟ್ವಾಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.


ಮೃತರನ್ನು ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಅಮ್ಟೂರ್ ಶರೀಫ್ (32) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಇವರು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದ ವೇಳೆ ಮರದಿಂದ ಕೆಳಗೆ ಬಿದ್ದು ಗಂಭೀ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರರು ಪತ್ನಿ ಹಾಗೂ 8 ತಿಂಗಳ ಮಗು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Also Read  ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

error: Content is protected !!
Scroll to Top