ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೃತ್ಯು ► ಹೃದಯಾಘಾತದ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.17. ಬೆಂಗಳೂರಿನಿಂದ ಮಂಗಳೂರು ತೆರಳುತ್ತಿದ್ದ ವೋಲ್ವೋ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವರು ಬಸ್ಸಿನಲ್ಲಿಯೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.

ಹೃದಯಾಘಾತದಿಂದಾಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಮೃತರ ಪರಿಚಯ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರ ಜೇಬಿನಲ್ಲಿ ಯದೀಶ್ ಡಿ. ವರದಿಗಾರರು, ಕರ್ನಾಟಕ ರಾಜಕೀಯ ಎನ್ನುವ ಐಡಿ ಕಾರ್ಡ್ ಪತ್ತೆಯಾಗಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group