ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 24. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ಉಂಟಾಗಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ತಿಳಿಯಾದ ಘಟನೆ ವರದಿಯಾಗಿದೆ.

ಇತ್ತಂಡಗಳ ಬೆಂಬಲಿಗರು ಹೊಡೆದಾಟಕ್ಕೆ ಸಿದ್ಧರಾಗುತ್ತಿರುವಾಗಲೇ ಪೊಲೀಸರು ಮಧ್ಯಪ್ರವೇಶಿಸಿ ಮಾಹಿತಿ ಪಡೆದ ಉಪ್ಪಿನಂಗಡಿ ಸಬ್ ಇನ್ಸ್ಪೆಕ್ಟರ್ ರಾಜೇಶ್ ಅವರು ಹೆಚ್ಚುವರಿ ಪೊಲೀಸ್ ಪಡೆಯೊಂದಿಗೆ ಕಾಲೇಜಿಗೆ ಧಾವಿಸಿ ಸಂಘರ್ಷಕ್ಕೆ ನಿಂತಿದ್ದ ವಿದ್ಯಾರ್ಥಿಗಳನ್ನು ಚದುರಿಸಿ, ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಮೇಲೆ ಗುರುವಾರ ಸಂಜೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯ ಎರಡೂ ವಿದ್ಯಾರ್ಥಿಗಳ ಬೆಂಬಲಿಗರು ಜಮಾಯಿಸಿ ಹೊಡೆದಾಟಕ್ಕೆ ಸಿದ್ಧರಾಗಿದ್ದರು ಎಂದು ತಿಳಿದು ಬಂದಿದೆ.

Also Read  'ಮದ್ಯ' ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!  

error: Content is protected !!
Scroll to Top