ಕಡಬ: ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಬಸ್ ➤‌ ರಸ್ತೆ ಬದಿಯ ಚರಂಡಿಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಹಿಂದಿನಿಂದ ತೆರಳುತ್ತಿದ್ದ ಮತ್ತೊಂದು ಕೆಎಸ್ಸಾರ್ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ಮಳೆ ಸುರಿಯುತ್ತಿದ್ದುದರಿಂದ ಬ್ರೇಕ್ ಸಿಗದೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

Also Read  ಪುಣೆಯಲ್ಲಿ ಹೆಲಿಕಾಫ್ಟರ್ ಪತನ

 

error: Content is protected !!
Scroll to Top