ವಿಟ್ಲ: ಮನೆಬಿಟ್ಟು ತೆರಳಿದ ಬಾಲಕಿಯರನ್ನು ಹುಡುಕುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಅಮಾಯಕರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 11. ಇಬ್ಬರು ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರನ್ನು ಹುಡುಕಿಕೊಂಡು ಬಂದ ಯುವಕರ ತಂಡವೊಂದು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಸಾಲೆತ್ತೂರು ನಿವಾಸಿ ಆಟೋ ಚಾಲಕರೊಬ್ಬರ ಪುತ್ರಿ, ಆಕೆಯ ಸ್ನೇಹಿತೆ ಮತ್ತೋರ್ವ ಬಾಲಕಿಯ ಜೊತೆ ಮನೆಯಲ್ಲಿ ಹೇಳದೇ ಮನೆಬಿಟ್ಟು ತೆರಳಿದ್ದರು.‌ ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಗದೇ ಇದ್ದ ಹಿನ್ನೆಲೆ, ಕೆಲ ಸ್ವಯಂ ಘೋಷಿತ ಸಮಾಜ ಸೇವಕರು ಅವರನ್ನು ಹುಡುಕಲು ಪ್ರಾರಂಭಿಸಿ, ವಿಟ್ಲದಲ್ಲಿ ಹುಡುಕಾಡುತ್ತಿದ್ದ ವೇಳೆ ಕುದ್ದುಪದವು ಮೂಲದ ಇಬ್ಬರು ಯುವತಿಯರು ಕಾಣಿಸಿದ್ದು, ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ಬಳಿಕ ಅವರು ಬುರ್ಖಾ ತೆಗೆದಾಗ ಬೇರೆಯವರು ಎಂದು ತಿಳಿದು ಪೇಚಿಗೆ ಸಿಲುಕಿದ್ದಾರೆ. ಬಳಿಕ ಸಾರ್ವಜನಿಕರು ಹಲ್ಲೆ ನಡೆಸಿದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ‌. ಘಟನೆ ನಡೆದ ಬೆನ್ನಲ್ಲೇ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪುತ್ತೂರು ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದು, ಅವರನ್ನು ವಿಟ್ಲ ಠಾಣೆಗೆ ಕರೆಯಿಸಿ, ಬುದ್ದಿವಾದ ಹೇಳಿ ಮನೆಯವರ ಜತೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

Also Read  ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

error: Content is protected !!
Scroll to Top