ಇಚಿಲಂಪಾಡಿ: ಖಾಸಗಿ ಬಸ್ – ಓಮ್ನಿ ಢಿಕ್ಕಿ ► ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ನ.18. ಖಾಸಗಿ ಬಸ್ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯ ಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳ ಕ್ಕೆ ತೆರಳುತ್ತಿದ್ದ ಉಡುಪಿ ಮೂಲದ ಓಮ್ನಿ ಕಾರು ಢಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

Also Read  ಉಡುಪಿಯಲ್ಲಿ ಬಿದಿರು ಪಟಾಕಿ ಸೌಂಡು ➤ ಇದು ನಮ್ಮ ಪೂರ್ವಜರ ಕೊಡುಗೆ.!

ಮೃತದೇಹವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಬಸ್ ಕಮರಿಗೆ ಉರುಳಿದ್ದು, ಬಸ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

error: Content is protected !!
Scroll to Top