ಭಗತ್ ಸಿಂಗ್ ಪಾತ್ರಾಭಿನಯ ತಂದ ಸಾವು

ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ವೇಳೆ ಬಾಲಕ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 7ನೇ ತರಗತಿಯ ಸಂಜಯ್ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕಾಗಿ ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಸಿದ್ಧತೆ ಮಾಡ್ತಿದ್ದ.

 


ಮನೆಗೆ ಬಂದ ಬಳಿಕವೂ ರಿಹರ್ಸಲ್​ಗೆ ಮುಂದಾಗಿದ್ದ. ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಜಿಗಿದಿದ್ದಾನೆ. ಹೀಗಾಗಿ, ಸಂಜಯ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

 

error: Content is protected !!
Scroll to Top