ಕಲ್ಲುಗುಡ್ಡೆ: ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.17. ಬಿರುವೆರ್ ಕುಡ್ಲ ಪುತ್ತೂರು ಘಟಕದ ಸದಸ್ಯತ್ವ ಅಭಿಯಾನವು ಇತ್ತೀಚಿಗೆ ಕಡಬ ಕಲ್ಲುಗುಡ್ಡೆಯಲ್ಲಿ ನಡೆಯಿತು.

ಪುತ್ತೂರು ಘಟಕದ ಪ್ರಧಾನ ಕಾರ್ಯದರ್ಶಿ ತೇಜಸ್ ಬಿರ್ವ ಕೇಪುಳು ಮಾತನಾಡಿ ಬಿರುವೆರ್ ಕುಡ್ಲದ ವತಿಯಿಂದ ಸಮಾಜದ ಎಲ್ಲಾ ವರ್ಗದ ಬಡಮಕ್ಕಳಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನೆರವಾಗುವುದು ಸೇರಿದಂತೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ತುಳುನಾಡಿನ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಬೇಕೆಂದರು.

ಕಡಬ ಪರಿಸರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚೇತನ್ ಕರ್ಕೇರಾ, ಲತೀಶ್ ಸುವರ್ಣ, ಪ್ರವೀಣ್ ಪೂಜಾರಿ, ಪುರಂದರ ಪೂಜಾರಿ, ಕೌಶಿಕ್ ಬಿರ್ವ, ಪ್ರತೀಕ್ ಕೋಟ್ಯಾನ್, ವಿನುತ್ ಸುವರ್ಣ, ಪ್ರದೀಪ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Also Read  ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

error: Content is protected !!
Scroll to Top