ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ

(ನ್ಯೂಸ್ ಕಡಬ) newskadaba.com ನ.15: ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಅವರು ವಿಧಿವಶರಾದರು. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ ಆಗಿತ್ತು.

ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಅನೇಕರು ಪ್ರಾರ್ಥಿಸಿದ್ದಾರೆ.

Also Read  ’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ 

error: Content is protected !!
Scroll to Top