ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 02. ಸಮಯದ ವಿಚಾರಕ್ಕೆ ಸಂಬಂಧಿಸಿ ಖಾಸಗಿ ಬಸ್ ನ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಟ ನಡೆದ ಘಟನೆ ವಿಟ್ಲದ ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ.

 

ಖಾಸಗಿ ಬಸ್ ನ ಎಜೆಂಟ್ ಜಯ ಕೊಟ್ಟಾರಿ ಮತ್ತು ಬಸ್ ಚಾಲಕ ಅಬ್ಬಾಸ್ ಎಂಬವರ ನಡುವೆ ಟೈಮಿಂಗ್ಸ್ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಬಳಿಕ ಅದು ತಾರಕಕ್ಕೇರಿ ಪರಸ್ಪರ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group